Latest

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದೆ.

ಅರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೀದರ್, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೀದರ್: ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಅವರ ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೇಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ. ಮೇದಾ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾಗಿದ್ದು ಅವರ ನಿವಾಸ ಹಾಗೂ ಕಚೇರಿ ಮೇಲೆ ಹಾಗೂ ಬೀದರ್‌ನ ಗುರುನಗರದ ನಿವಾಸ ಹಾಗೂ ನೌಬಾದ್‌ನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ಎನ್.ಎಂ‌.ಓಲೇಕಾರ್‌ ನೇತೃತ್ವದಲ್ಲಿ ದಾಳಿ ನಡೆದಿದೆ.

Home add -Advt

ಕೋಲಾರ: ಇಲ್ಲಿನ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಎನ್.ವೆಂಕಟೇಶಪ್ಪ ಅವರಿಗೆ ಸೇರಿದ ಬಂಗಾರಪೇಟೆ ಪಟ್ಟಣದ ಮೂರು ಮನೆಗಳು, ಮುಳಬಾಗಿಲು ತಾಲ್ಲೂಕು ತಿಪ್ಪದೊಡ್ಡಿಯ ಎರಡು ಕಡೆ ಸೇರಿದಂತೆ ಒಟ್ಟು 5ಕಡೆ ದಾಳಿ ನಡೆಸಲಾಗಿದೆ. ಬಂಗಾರಪೇಟೆ ತಾಪಂ ಇಒ ಆಗಿ ವೆಂಕಟೇಶಪ್ಪ 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಎರಡು ದಿನಗಳ‌ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆಯಾದ್ದರು.

ಬಳ್ಳಾರಿ:  ಜೆಸ್ಕಾಂ ಅಧಿಕಾರಿ ಹುಸೇನ್ ಸಾಬ್‌ ಅವರಿಗೆ ಸೇರಿದ ಬಳ್ಳಾರಿ ಮತ್ತು ಹೊಸಪೇಟೆಯ ನಿವಾಸ ಸೇರಿ ಒಟ್ಟು ಆರು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬಳ್ಳಾರಿಯ ರಾಘವೇಂದ್ರ ಕಾಲನಿಯ ಮನೆ, ಹೊಸಪೇಟೆ ಮನೆ ಸೇರಿ ಆರು ಕಡೆಗಳಲ್ಲಿ ಡಿವೈಎಸ್ಪಿ ರಾಮರಾವ್ ನೇತೃತ್ವದಲ್ಲಿ ಬಳ್ಳಾರಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ.

ಶಿವಮೊಗ್ಗ: ಇಲ್ಲಿನ ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್‌ಐಎಂ ನಾಗರಾಜ್ ಮನೆ ಫಾರಂ ಹೌಸ್ ಕಾಂಪ್ಲೆಕ್ಸ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಕಾಂಪ್ಲೆಕ್ಸ್ ಮತ್ತು ಮನೆ, ಅನುಪಿನ ಕಟ್ಟೆಯಲ್ಲಿರುವ ವಿಸ್ಮಯ ಫಾರ್ಮ್ ಹೌಸ್, ಕಲ್ಲೂರು ಮಂಡಳಿ ಬಳಿ ಇರುವ ಫ್ಯಾಕ್ಟರಿ ಮೇಲೆ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಇನ್ಸ್ಪೆಕ್ಟರ್ ಆಂಜನೇಯ ಸೇರಿದಂತೆ ಮೂವರು ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಯುತ್ತಿದೆ.

ದಕ್ಷಿಣ ಕನ್ನಡ: ಜಿಲ್ಲೆಯ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಜಿ ಸಚಿವ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ ನಡೆದಿದೆ. ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಪ್ರಸನ್ನ ಇನ್ಸ್ಟಿಟ್ಯೂಟ್, ಇಂದಬೆಟ್ಟುನಲ್ಲಿರುವ ಮನೆ ಮೇಲೆ 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

https://pragati.taskdun.com/four-watermen-who-went-down-to-the-river-to-remove-shells/
https://pragati.taskdun.com/another-cheetah-death-brought-to-kuno-national-park/
https://pragati.taskdun.com/union-cabinet-in-karnataka-on-25th-26th/

Related Articles

Back to top button