Kannada NewsKarnataka NewsLatest
*ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಹೆಸರು ಪ್ರಕಟಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ: ಆಸ್ತಿ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಹೆಸರುಗಳನ್ನು ಕರ್ನಾಟಕ ಲೋಕಾಯುಕ್ತ ಪ್ರಕಟಿಸಿದೆ.
ಐವರು ಸಚಿವರು, 67 ಶಾಸಕರು ಹಾಗೂ ವಿಧಾನ ಪರಿಷತ್ ನ 28 ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ. ಸಚಿವರಾದ ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ಯು.ಬಿ.ವೆಂಕಟೇಶ್ ಹಾಗೂ ರಹೀಂ ಖಾನ್ ಆಸ್ತಿ ವಿವರ ಸಲ್ಲಿಸಿಲ್ಲ.
ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿ ವರ್ಷ ಜೂನ್ 30ರ ಮೊದಲು ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಬೇಕು.




