
ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಅಧಿಕಾರಿಗಳ ಹೆಸರಲ್ಲಿ ನಿವೃತ್ತ ಹೆಡ್ ಕಾನ್ಸ್ ಟೇಬಲ್ ನಿಂಗಪ್ಪ ಹಾಗೂ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ.ಜೋಶಿ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶ್ರೀನಾಥ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಕರೆಯಲಾಗಿದೆ.
ಶ್ರೀನಾಥ್ ಜೋಶಿ ಲೋಕಾಯುಕ್ತ ವಿಭಾಗದ ಬೆಂಗಳೂರು ನಗರ-1ರ ಎಸ್ ಪಿಯಾಗಿದ್ದರು. ಕಾನ್ಸ್ ಟೇಬಲ್ ನಿಂಗಪ್ಪ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಅವರನ್ನು ಲೋಕಾಯುಕ್ತ ಪೊಲೀಸ್ ಸೇವೆಯಿಂದ ಬಿಡುಗಡೆ ಮಾಡಲಾಗಿತ್ತು.