Kannada NewsKarnataka NewsLatest
*ಹಾಡ ಹಗಲೇ ಜೋಡಿ ಕೊಲೆ; ಪ್ರತಿಷ್ಠಿತ ಕಂಪನಿ ಎಂಡಿ, ಸಿಇಒಗಳ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಾಡ ಹಗಲೇ ರಾಜಧಾನಿ ಬೆಂಗಳೂರಿನಲ್ಲಿ ಜೋಡಿ ಕೊಲೆ ನಡೆದಿದ್ದು, ಪ್ರತಿಷ್ಠಿತ ಕಂಪನಿಗಳ ಎಂಡಿ ಹಾಗೂ ಸಿಇಒ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಏರೋನಿಕ್ಸ್ ಇಂತರ್ನೆಟ್ ಕಂಪನಿ ಸಿಇಒ ವಿನುಕುಮಾರ್ ಎಂಬುವವರನ್ನು ಬೀಕರವಾಗಿ ಹತ್ಯೆ ಮಾಡಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ.
ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ದುಷ್ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.


