Kannada NewsKarnataka NewsLatest

*45 ಕಂದಾಯ ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ; ಖುದ್ದು ಅಖಾಡಕ್ಕಿಳಿದ ಲೋಕಾ ನ್ಯಾ.ಬಿ.ಎಸ್.ಪಾಟೀಲ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಕೆ.ಆರ್.ಪುರಂ, ಮಹದೇವಪುರ ಸೇರಿದಂತೆ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Home add -Advt

ಖುದ್ದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರೇ ದಾಳಿಯಲ್ಲಿ ಭಾಗಿಯಾಗಿದ್ದು, ರಾಜಾಜಿನಗರದ ಕಂದಾಯ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ಅಧಿಕಾರಿ ಹೆಚ್.ಭಾರತಿಯವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ. ಕಂದಾಯ ಕಚೇರಿಯ ಆರ್ ಒ, ಎಆರ್ ಒ, ಎಡಿಟಿಪಿ ಅಧಿಕಾರಿಗಳ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.


Related Articles

Back to top button