Kannada NewsKarnataka NewsLatest
*ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ನಾಡ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಹೊಳಲೂರಿನ ಉಪ ತಹಶೀಲ್ದಾರ್ ಪರಮೇಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಡಿವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಉಪ ತಹಶೀಲ್ದಾರ್ ರನ್ನು ವಶಕ್ಕೆ ಪಡೆಯಲಾಗಿದೆ.
ಪರಮೇಶ್ವರಪ್ಪ 40 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 30 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.



