Latest

ಪರಿಷತ್ ಉಪಸಭಾಪತಿ ಧರ್ಮೇಗೌಡ ಸಾವಿನ ಬಗ್ಗೆ ಉನ್ನತ ತನಿಖೆಗೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಓಂ ಬಿರ್ಲಾ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ಬೇಸರ ತಂದಿದೆ. ಸದನದಲ್ಲಿ ನಡೆದ ಘಟನೆಯಿಂದ ಪ್ರಜಾಪ್ರಭುತ್ವದ ಘನತೆಗೆ ಧಕ್ಕೆಯಾಗಿದೆ. ಧರ್ಮೇಗೌಡರ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

Home add -Advt

ಸಾಂವಿಧಾನಿಕ ಸಂಸ್ಥೆಗಳ ಸಮಗ್ರತೆ ಹಾಗೂ ಸಭಾಪತಿಗಳ ಘನತೆ ಮತ್ತು ಸ್ವಾತಂತ್ರ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.

Related Articles

Back to top button