Kannada NewsKarnataka NewsLatest

*ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ; ಸಂಕಷ್ಟಕ್ಕೆ ಸಿಲುಕಿದ ರಾಜ್ಯದ 23 ಯಾತ್ರಿಕರು*

ಪ್ರಗತಿವಾಹಿನಿ ಸುದ್ದಿ; ಗದಗ: ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತವುಂಟಾಗಿದ್ದು, ರಾಜ್ಯದ 23 ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಅಮರನಾಥದಲ್ಲಿ ನಿರಂತರ ಮಳೆ, ಗುಡ್ಡ ಕುಸಿತದಿಂದಾಗಿ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಅಮರನಾಥ ಯಾತ್ರೆಗೆ ತೆರಳಿದ್ದ ಗದಗದ ಭಕ್ತರು, ಸಧ್ಯ ಪಂಚತರಣಿ ಕ್ಯಾಂಪ್ ನಲ್ಲಿ ಆಶ್ರಯ ಪಡೆದಿದ್ದಾರೆ. ಈ ಬಗ್ಗೆ ಭಕ್ತರು ಗದಗ ಜಿಲ್ಲೆಯ ಎಸ್.ಪಿ ಅವರಿಗೆ ಮಾಹಿತಿ ನೀಡಿದ್ದಾರೆ.

ಎಸ್.ಪಿ.ಬಿ.ಎಸ್.ನೇಮಗೌಡ ಅವರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button