Karnataka News

*ಯಲ್ಲಾಪುರದಲ್ಲಿ ಭೀಕರ ಅಪಘಾತ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದು 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಗುಳ್ಳಾಪುರದ ಬಳಿ ಘಟ್ಟ ಪ್ರದೇಶದಲ್ಲಿ ಲಾರಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಮುಂಜಾನೆ ಮಂಜು ಕವಿದ ವಾತಾವರಣ, ಘಟ್ಟ ಪ್ರದೇಶದಲ್ಲಿ ಲಾರಿ ಮುಂದಿನ ವಾಹನಕ್ಕೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button