Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದದರೆ. ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಬಾಗಲಕೋಟೆ ಮೂಲದ ಚಟ್ನಿಹಾಳು ಗ್ರಾಮದ ಮುತ್ತಪ್ಪ ಪೂಜಾರ್(35) ಹಾಗೂ ಪತ್ನಿ ರೇಣುಕಾ (30) ಮೃತ ದುರ್ದೈವಿಗಳು. ಮಕ್ಕಳಾದ ಅನುಶ್ರೀ (9), ರೂಪಶ್ರೀ (6), ಖುಷಿ (4) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುತ್ತಪ್ಪ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾದುತ್ತಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

Related Articles

Back to top button