Kannada NewsKarnataka NewsLatest

*ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರಿನ ನಡುವೆ ಸಂಭವಿದ ಅಪಘಾತದಲ್ಲಿ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಘಟನೆಯಲ್ಲಿ ತಾಯಿ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರು. ಅಪಘಾತದ ಭೀಕರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಧಗ ಧಗಿಸಿ ಉರಿದಿದೆ. ಕಾರಿನಲ್ಲಿದ್ದ ತಾಯಿ ಹಾಗೂ ಮಗು ಸಜೀವ ದಹನವಾಗಿದ್ದಾರೆ. ಪತಿ ಹಾಗೂ ಇನ್ನೋರ್ವ ಮಗಳ ಕಣ್ಮುಂದೆಯೇ ಈ ಘಟನೆ ನಡೆದಿದೆ.

ತಾಯಿ ಸಿಂಧು ಹಾಗೂ 2 ವರ್ಷದ ಮಗಳು ಮೃತರು. ತಂದೆ ಮಹೇಂದ್ರ ಹಾಗೂ ಇನ್ನೋರ್ವ ಮಗಳಿಗೆ ಗಂಭೀರ ಗಾಯಗಲಾಗಿದ್ದು, ಉತರಹಳ್ಳಿ ಬಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ನಿದ್ರೆ ಮಂಪರಿನಲ್ಲಿದ್ದುದರಿಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button