Kannada NewsKarnataka NewsLatest

*ಭೀಕರ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ದುರ್ಮರಣ: ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ. ಅನಂತ ಪದ್ಮನಾಭ (70) ಮೃತ ಲಾರಿ ಚಾಲಕ. ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಅಗರ, ನಿಂಗರಾಜ ನಾಯಕ, ಮಲ್ಲೇಶ್ ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.


Related Articles

Back to top button