Latest

ಭೀಕರ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಲಿಸುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ ಆಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಹಿರಿಯೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಈ ಘಟನೆ ನಡೆದಿದೆ. ಈರುಳ್ಳಿ ತುಂಬಿದ್ದ ಲಾರಿ ಗದಗದಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಹಿರಿಯೂರು ಬಳಿ ಲಾರಿ ಟೈರ್ ಸ್ಫೋಟಗೊಂಡು ಲಾರಿ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಗುದ್ದಿದೆ. ಕ್ಯಾಂಟರ್, ಲಾರಿ ಹಾಗೂ ಕಾರು ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಶಾಂತ್ ಹಟ್ಟಿ (36) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
21 ವರ್ಷದ ಬಳಿಕ ಭಾರತಕ್ಕೆ ಭುವನಸುಂದರಿ ಪಟ್ಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button