Karnataka News

*ಏಕಾಏಕಿ ರಸ್ತೆಬದಿಯ ಮನೆಗಳಿಗೆ ನುಗ್ಗಿದ ಲಾರಿ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಏಕಾಏಕಿ ಮನೆಗಳಿಗೆ ನುಗ್ಗಿದ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ನಡೆದಿದೆ.

Home add -Advt

ರಾಮಪ್ಪ ಹಾಗೂ ಜಯಪ್ಪ ಎಂಬುವವರ ಮನೆಗಳಿಗೆ ಲಾರಿ ನುಗ್ಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಎರಡೂ ಮನೆಗಳು ಹಾನಿಯಾಗಿವೆ. ಲಾರಿ ಚಾಲಕ ಗಾಯಗೊಂಡಿದ್ದಾನೆ.

ಚನ್ನಗಿರಿ ಕಡೆಯಿಂದ ದಾವಣಗೆರೆ ಕಡೆ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಎರದು ಮನೆಗಳಿಗೆ ನುಗ್ಗಿದೆ. ಘಟನಾ ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Articles

Back to top button