Belagavi NewsBelgaum NewsKarnataka News
*ನಿಂತಿದ್ದ ಲಾರಿಗೆ ಗುದ್ದಿದ ಕಾರು: ಬೆಳಗಾವಿಯಲ್ಲಿ ಭೀಕರ ಅಪಘಾತ*

ಸ್ವಲ್ಪದರಲ್ಲಿ ಬಚಾವ್ ಆದ ಕಾರು ಚಾಲಕ
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕ್ಲಬ್ ರಸ್ತೆಯಿಂದ ಹಿಂಡಲಗಾ ಗಣೇಶ ಮಂದಿರ ಮಾರ್ಗದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾದ ಘಟನೆ ನಡೆದಿದೆ.
ಹಿಂಡಲಗಾದಿಂದ ವೇಗವಾಗಿ ಬರುತ್ತಿದ್ದ ಕಾರು ಗಾಂಧಿ ಪ್ರತಿಮೆ ಬಳಿ ಚಾಲಕನ ನಿಯಂತ್ರಣ ತಪ್ಪಿ ನಿಂತ ಲಾರಿಗೆ ಅಪ್ಪಳಿಸಿದೆ. ಕಾರು ಚಾಲಕನಿಗೆ ಸಣ್ಣಪುಟ್ಟಗಾಯವಾಗಿವೆ.
ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




