Karnataka News
*ಭೀಕರ ಅಪಘಾತ: ಸ್ಥಳದಲ್ಲೇ ಕಾರಿನಲ್ಲಿದ್ದ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.




