*ಭೀಕರ ಅಪಘಾತ; ಸ್ಥಳದಲ್ಲೇ 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಎರಡು ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಲಾರಿ ಆಕ್ಸಲ್ ಕಟ್ ಆಗಿ ಈ ಅಪಘಾತ ಸಂಭವಿಸಿದೆ.ಘಟನೆಯಲಿ 7 ಜನರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹೊಸಪೇಟೆ ಮೂಲದವರು ಎನ್ನಲಾಗಿದೆ. ಆದರೆ ಗುರುತು ತಿಳಿದುಬಂದಿಲ್ಲ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading *ಭೀಕರ ಅಪಘಾತ; ಸ್ಥಳದಲ್ಲೇ 7 ಜನರು ದುರ್ಮರಣ*