Karnataka News

*ಏಪ್ರಿಲ್ 14ರಿಂದ ಲಾರಿ ಮುಷ್ಕರಕ್ಕೆ ಕರೆ*

ಪ್ರಗತಿವಾಹಿನಿ ಸುದ್ದಿ: ಡೀಸೆಲ್ ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 14ರಿಂದ ಲಾರಿ ಮಾಲೀಕರ ಸಂಘ ಲಾರಿ ಮುಷ್ಕರಕ್ಕೆ ಕರೆ ನೀಡಿದೆ.

ಈ ಬಗ್ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಮಾಹಿತಿ ನೀಡಿದ್ದು, ಡೀಸೆಲ್ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಾಗಿದೆ. ಏ.14ರಿಂದ ಅನಿರ್ಧಿಷ್ಟಾವಧಿವರೆಗೆ ರಾಜ್ಯಾದ್ಯಂತ ಲಾರಿ ಮುಷ್ಕರ ಆರಂಭಿಸಲಾಗುವುದು ಎಂದು ತಿಳಿಸಿದರು.

ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಅಕ್ಕಿ ಸಾಗಿಸುವ ಲಾರಿಗಳ ಸಂಚಾರ ಸ್ಥಗಿತಗೊಳಿಸಲಾಗುವುದು. ಬೇರೆ ರಾಜ್ಯಗಳ ಲಾರಿಗಳು ಕರ್ನಾಟಕ ಪ್ರವೇಶಿಸಲು ಬಿಡಲ್ಲ. ಡೀಸೆಲ್ ದರ ಕಡಿಮೆ ಮಾಡುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದರು.

Home add -Advt

Related Articles

Back to top button