Kannada NewsKarnataka NewsLatest

*ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಟಿಟಿ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಚೆನ್ನಪಟ್ಟಣದ ಚಾಮುಂಡೇಶ್ವರಿ ಕಾಲೇಜು ಬಳಿ ಈ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚೆನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ಇಬ್ಬರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ಶಿಫ್ಟ ಮಾಡಲಾಗಿದೆ. ಟಿಟಿಯಲ್ಲಿದ್ದವರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದರು. ಮೃತರನ್ನು ಸೋಮಲಿಂಗಪ್ಪ, ಶಿವಲಿಂಗಪ್ಪ, ರಾಜೇಶ್ವರಿ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button