LatestNational

*ಗೊಡಂಬಿ ಲಾರಿ ಭೀಕರ ಅಪಘಾತ: 7 ಜನರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಗ್ರಾಮದಲ್ಲಿ ನಡೆದಿದೆ.

ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದವರು. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. ಲಾರಿಯಲ್ಲಿ ಒಟ್ಟು ಹತ್ತು ಜನರು ಪ್ರಯಾಣಿಸುತ್ತಿದ್ದರು. 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button