
ಪ್ರಗತಿವಾಹಿನಿ ಸುದ್ದಿ: ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.
ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ.
ಮಡೆನೂರು ಮನು ಹಾಗೂ ಯುವತಿ 2018ರಲ್ಲಿ ಪರುಚಯವಾಗಿದ್ದರಂತೆ. ಮನು ಅವರೇ ಯುವತಿಗೆ ಬಾಡಿಗೆ ಮನೆ ಹುಡುಕಿ ಕೊಟ್ಟಿದ್ದರಂತೆ. ಕಾಮಿಡಿ ಕಿಲಾಡಿಗಳು ಶೋನಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಮನುಗೆ ಈಗಾಗಲೇ ಮದುವೆಯಾಗಿ ಒಂದು ಮಗು ಇದೆ. ಕಾರ್ಯಕ್ರಮವೊಂದಕ್ಕೆ ಮನು ಜೊತೆ ಹೋಗಿದ್ದ ಯುವತಿ ಅತ್ಯಾಚಾರ ಆರೋಪ ಮಾಡಿದ್ದಾರೆ.
‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ಮಡೆನೂರು ಮನು ಹಿರೋ ಆಗಿ ಅಭಿನಯಿಸಿದ್ದು, ಈ ಚಿತ್ರ ನಾಳೆ ಮೇ 23ರಂದು ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ಮನು ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.