Kannada NewsLatestNational

*ಬಾವಿ ನಿರ್ಮಾಣದ ವೇಳೆ ಮಣ್ಣು ಕುಸಿತ: ಐವರು ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಾವಿ ನಿರ್ಮಾಣದ ವೇಲೆ ಮಣ್ಣು ಕುಸಿದು ಬಿದ್ದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಇಲ್ಲಿನ ಪನ್ನಾದ ಅಜಯ್‌ಗಢ್ ತೆಹಸಿಲ್‌ನ ಬಿಹಾರಪೂರ್ವ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಿನ್ನು ಅಹಿರ್ವಾರ್ ಅವರ ಹೊಲದಲ್ಲಿ ಬಾವಿ ನಿರ್ಮಾಣ ಕೆಲಸ ಮಾಡಲಾಗುತ್ತಿತ್ತು.ಕಳೆದ ಹತ್ತು ದಿನಗಳಿಂದ ಕೆಲಸ ನಡೆಯುತ್ತಿತ್ತು. ಇಂದು ಏಕಾಏಕಿ ಮಣ್ಣು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

Home add -Advt

ಚುನ್ನು ಯಾದವ್, ರಾಜ್‌ಕುಮಾರ್ ಯಾದವ್, ಆಶಿಶ್ ಯಾದವ್ ಮತ್ತು ಚುನ್ವಾಡ್ ಪಾಲ್ ಸೇರಿದಂತೆ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕಂದಾಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related Articles

Back to top button