Belagavi NewsBelgaum NewsKannada NewsKarnataka NewsNationalPolitics

*ಮಹಾದಾಯಿ ಜಲವಿವಾದ: ವರದಿ ನೀಡುವ ಅವಧಿ ವಿಸ್ತರಿಸಿದ ಸಚಿವಾಲಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾದಾಯಿ ಜಲವಿವಾದ ಕುರಿತು ಇನ್ನಷ್ಟು ವರದಿ ಸಲ್ಲಿಸಬೇಕಾಗಿದ್ದು, ಈ ಸಂಬಂಧ ಮಹಾದಾಯಿ ನ್ಯಾಯಮಂಡಳಿಗೆ 6 ತಿಂಗಳವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಧಿಯು ಆ.20ರಿಂದಲೇ ಅನ್ವಯವಾಗಲಿದೆ.

ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ಸಮಸ್ಯೆಯಾಗಿರುವ ಮಹದಾಯಿ ನೀರು ಹಂಚಿಕೆ ವಿವಾದ ಕುರಿತು ಪರಿಹಾರ ಕಂಡುಕೊಳ್ಳಲು ಮಹದಾಯಿ ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿತ್ತು. ಈ ಮಂಡಳಿಯು ಇನ್ನೂ ಹೆಚ್ಚಿನ ವರದಿಯನ್ನು ನೀಡುವ ಕುರಿತಾಗಿ ಕಾಲಾವಕಾಶ ಕೋರಿ ಜಲಶಕ್ತಿ ಸಚಿವಾಲಯಕ್ಕೆ ಕೋರಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯೇ ಸಚಿವಾಲಯವು ಅವಧಿಯನ್ನು ವಿಸ್ತರಿಸಿ ಅಧಿಸೂಚನೆ ಪ್ರಕಟಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button