*ಮಹಾಕುಂಭಮೇಳಕ್ಕೆ ತೆರಳುವಾಗ ಭೀಕರ ಅಪಘಾತ: ರಾಜ್ಯದ ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಟಿಟಿ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕರ್ನಾಟಕದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೃತ ಮಹಿಳೆ ಬೆಂಗಳೂರು ಮೂಲದವರಾಗಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಒರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಿಟಿ ವಾಹನ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತ ದೇಹ ಸ್ಥಳಾಂತರಕ್ಕೆ … Continue reading *ಮಹಾಕುಂಭಮೇಳಕ್ಕೆ ತೆರಳುವಾಗ ಭೀಕರ ಅಪಘಾತ: ರಾಜ್ಯದ ಮಹಿಳೆ ಸಾವು*