
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಗ ಮತ್ತೊಂದು ಅಪಘಾತ ಸಂಭವಿಸಿದೆ. ರಾಜ್ಯದ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ.
ನಾಳೆ ಮಹಾಶಿವರಾತ್ರಿ ಹಾಗೂ ಕುಂಭಮೇಲಕ್ಕೆ ಕೊನೆ ದಿನವಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪ್ರಯಾಗ್ ರಾಜ್ ನತ್ತ ತೆರಳುತ್ತಿದ್ದಾರೆ. ಕರ್ನಾಟಕದ ವಿಜಯಪುರದಿಂದ ಪ್ರಯಾಗ್ ರಾಜ್ ಗೆ ತೆರಳುತ್ತಿದ್ದ ಭಕ್ತರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಗುಜರಾತ್ ನ ಫೋರ್ ಬಂದರ್ ನಲ್ಲಿ ನಿಂತಿದ್ದ ಟಿಪ್ಪರ್ ಗೆ ಭಕ್ತರ ವಾಹನ ಡಿಕ್ಕಿಯಾಗಿದ್ದು, ವಿಜಯಪುರ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ