Politics

*ಸಿಎಂ, ಡಿಸಿಎಂ, ಗೃಹಸಚಿವರ ವಿರುದ್ಧ ದೂರು ದಾಖಲಿಸಿದ ಸ್ವಾಮೀಜಿಗಳು*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಆರ್ ಸಿಬಿ ವಿರುದ್ಧ ಸ್ವಾಮೀಜಿಗಳು ದೂರು ದಾಖಲಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಡಾ.ಪ್ರಣವಾನಂದ ಸ್ವಾಮೀಜಿ, ಗುಂಡಯ್ಯ ಸ್ವಾಮೀಜಿ ಸೇರಿದಂತೆ ಮೂವರು ಸ್ವಾಮೀಜಿಗಳ ನಿಯೋಗ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲಿಸಿದೆ.

Home add -Advt

ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


Related Articles

Back to top button