ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಲೋಕಸಭಾ ಚುನಾವಣಾ ಸಿದ್ಧತಾ ಸಭೆ ಭಾನುವಾರ ನಡೆಯಿತು.
ರಾಜಸ್ಥಾನದ ಮಾಜಿ ಸಚಿವೆ ಹಾಗೂ ಕರ್ನಾಟಕದ ಬಿಜೆಪಿ ಲೋಕಸಭಾ ಚುನಾವಣೆ ಸಹ ಉಸ್ತುವಾರಿ
ಕಿರಣ್ ಮಹೇಶ್ವರಿ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಸಂಸದರಾದ ಸುರೇಶ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಹಾಗೂ ಎಂ.ಎಲ್.ಸಿ ಮಹಾಂತೇಶ ಕವಟಗೀಮಠ ಚುನಾವಣಾ ಪ್ರಭಾರಿ ಈರಣ್ಣ ಕಡಾಡಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ವಿ. ಆಯ್.ಪಾಟೀಲ್ , ರಾಜೇಂದ್ರ ಹರಕುಣಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.