
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಮುಂಬೈ ಪೊಲೀಸರಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾನೆ ಎನ್ನಲಾಗಿದೆ.
ಗೋರೆಗಾಂವ್, ಜೆ.ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯ ಮಂತ್ರಾಲಯದ ನಿಂಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶಗಳು ಬಂದಿವೆ. ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಆರೋಪಿ ಪತ್ತೆಗೆ ಶೋಧ ನಡೆಸಿದ್ದಾರೆ.