Kannada NewsLatestNational

*ಕಂದಕಕ್ಕೆ ಉರುಳಿ ಬಿದ್ದ ಕಾರು: 8 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗರ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

Home add -Advt

ಮಹಾರಾಷ್ಟ್ರದ ರಾಯಗಢದ ಮಹಾಬಲೇಶ್ವರ-ಪೋಲಾದ್​ಪುರ ರಸ್ತೆಯಲ್ಲಿ ತಡರಾತ್ರಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ 8 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದೆ.ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ.

ಪೋಲಾದ್‌ಪುರ ಪೊಲೀಸರು, ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕಂದರದ ತೀವ್ರ ಆಳ ಮತ್ತು ಈ ಪ್ರದೇಶದಲ್ಲಿ ಕತ್ತಲೆಯಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದ್ದಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರು ಸತಾರಾ ಜಿಲ್ಲೆಯ ಕೊರೆಗಾಂವ್ ತಾಲ್ಲೂಕಿನ ಅಸ್ಗಾಂವ್ ಗ್ರಾಮಕ್ಕೆ ಸೇರಿದ್ದು. ಅವರು ದಪೋಲಿಯಿಂದ ಸತಾರಾಕ್ಕೆ ತೆರಳುತ್ತಿದ್ದಾಗ ವಾಹನ ಕಮರಿಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Related Articles

Back to top button