Kannada NewsLatest

ಮಹಾರಾಷ್ಟ್ರದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಶಿವಸೇನೆ ಕ್ಯಾತೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆಯ ಠಾಕ್ರೆ ಬಣ ವಿರೋಧ ವ್ಯಕ್ತಪಡಿಸಿದ್ದು, ಮೊದಲು ನಮಗೆ ಕರ್ನಾಟಕದಲ್ಲಿ ಮರಾಠಿ ಭವನ ನಿರ್ಮಾಣಕ್ಕೆ ಅವಕಾಶ ಕೊಡಿ. ನಂತರ  ಕರ್ನಾಟಕ ಭವನ ನಿರ್ಮಾಣ ಮಾಡುವಂತೆ ಹೇಳಿದೆ.

ಕೊಲ್ಲಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಸೇನೆಯ ಠಾಕ್ರೆ ಬಣದ ಜಿಲ್ಲಾಧ್ಯಕ್ಷ ರವಿಕಿರಣ ಇಂಗವಳ್ಳಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟದಲ್ಲಿ ಹಲವು ನಮ್ಮವರು ಮೃತಪಟ್ಟಿದ್ದಾರೆ. ಅವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಈಗ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಹಾರಾಷ್ತ್ರಕ್ಕೆ ಬಂದು ಕರ್ನಾಟಕ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಮೊದಲು ನಮಗೆ ಕರ್ನಾಟಕದಲ್ಲಿ ನಮ್ಮ ಭವನ ನಿರ್ಮಾಣಕ್ಕೆ ಅವಕಾಶ ಕೊಡಲಿ ನಂತರ ನೀವು ಬಂದು ಕರ್ನಾಟಕ ಭವನ ನಿರ್ಮಾಣ ಮಾಡಿ ಎಂದು ಕಿಡಿಕಾರಿದ್ದಾರೆ.

ಒಂದು ವೇಳೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಭವನ ನಿರ್ಮಾಣ ಮಾಡಿದರೆ ನಾವು ಕರ್ನಾಟಕ ಭವನ ಹೆಸರು ತೆಗೆದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅ.10ರಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಮಠದಲ್ಲಿ ನಡೆದಿದ್ದ ಸಂತ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಬೊಮ್ಮಾಯಿ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ಅನುದಾನ ನೀಡುವುದಾಗಿ ಘೋಷಿಸಿದ್ದರು.

ಮುರುಘಾಮಠದ ಪವರ್ ಆಫ್ ಅಟಾರ್ನಿ ಹಸ್ತಾಂತರ

https://pragati.taskdun.com/latest/murughamathashivamurti-sharanapower-of-attorney/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button