Kannada NewsKarnataka NewsLatest

ಬೆಳಗಾವಿಯಲ್ಲಿ ಮಹಾರುದ್ರಾಭಿಷೇಕ, ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಸಂದರ್ಭದಲ್ಲಿ ರಾಮತೀರ್ಥ ನಗರದಲ್ಲಿರುವ ಶಿವಾಲಯದಲ್ಲಿ ವಿಶ್ವ ಹಿಂದೂ ಪರಿಷತ್ , ಭಾರತೀಯ ಜನತಾ ಪಾರ್ಟಿ ಹಾಗೂ ರಾಮತೀರ್ಥ ನಗರದ ರಹವಾಸಿಗಳಿಂದ ಮಹಾ ರುದ್ರಾಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
 ಬುಧವಾರ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಜರುಗಿತು. ಮಹಾಂತೇಶ ವಕ್ಕುಂದ, ಈರಯ್ಯ ಖೋತ, ಆನಂದ ಕರಲಿಂಗನ್ನವರ, ಸುರೇಶ ಯಾದವ, ಕೇದಾರ ಜೋರಾಪುರ, ರೋಹನ ಜಾಧವ, ಶಿವಪ್ಪ ಕಿವಡಸಣ್ಣವರ, ಮಲ್ಹಾರ ದೀಕ್ಷಿತ, ಮಹಾದೇವ ಟೊನ್ನೆ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button