CrimeKannada NewsKarnataka NewsNationalPolitics

*ಸಿಎಂ ಭಾಗಿ ಆಗಬೇಕಿದ್ದ ಕಾರ್ಯಕ್ರಮದಲ್ಲಿ ಭಾರಿ ಅವಘಡ: ಕಟೌಟ್ ಕುಸಿದು ಮೂವರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ : ಹುಬ್ಬಳ್ಳಿಯಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಆದರೆ ಕಾರ್ಯಕ್ರಮಕ್ಕಿಂತ ಮುಂಚೆ ಭಾರಿ ಅವಘಡ ಸಂಭವಿಸಿದೆ.‌

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ಕಾರದಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಇವತ್ತು ನಡೆಯಲಿದೆ. ಇದೀಗ ಕಾರ್ಯಕ್ರಮಕ್ಕೂ ಮುನ್ನ ಅವಘಡ ಸಂಭವಿಸಿದೆ.

Home add -Advt

ಸಿಎಂ ಭಾಗಿ ಆಗುತ್ತಿರುವ ವೇದಿಕೆ ಮುಂಭಾಗದಲ್ಲಿ ಹಾಕಿದ್ದ ಕಟೌಟ್ ಕುಸಿತವಾಗಿ ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದೆ.

ವೇದಿಕೆ ಮುಂಭಾಗದಲ್ಲಿ ಹಾಕಿದ್ದ ನಾಯಕರ ಕಟೌಟ್ ಕುಸಿತವಾಗಿದೆ. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವಘಡ ಸಂಭವಿಸಿದ್ದು ಕಟೌಟ್ ಬಿದ್ದಿದ್ದರಿಂದ ಮೂವರಿಗೆ ಗಂಭೀರ ಗಾಯವಾಗಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ಕಾರದಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಇವತ್ತು ನಡೆಯಲಿದೆ. ಇದೀಗ ಕಾರ್ಯಕ್ರಮಕ್ಕೂ ಮುನ್ನ ಅವಘಡ ಸಂಭವಿಸಿದೆ.

Related Articles

Back to top button