Kannada NewsNationalTravel

*ದೇಹಲಿ ಸ್ಫೋಟದ ಪ್ರಮುಖ ಬೆಳವಣಿಗೆಗಳು*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಪ್ರಬಲ ಸ್ಫೋಟದ ತನಿಖೆ ನಡೆಯುತಿದ್ದು, ಯಾವುದೇ ಭಯೋತ್ಪಾದಕ ಚಟುವಟಿಕೆಗೆ ಸಂಬಂಧಿಸಿದೆಯೇ ಎಂದು ಅಧಿಕಾರಿಗಳು ಇನ್ನೂ ನಿರ್ಧರಿಸಿಲ್ಲ.

ಅಮಿತ್ ಶಾ ಹೇಳಿದಿಷ್ಟು

Home add -Advt

ಘಟನೆಯ ಬಗ್ಗೆ ಭದ್ರತಾ ಸಂಸ್ಥೆಗಳು ತನಿಖೆ ಮುಂದುವರಿಸಿರುವುದರಿಂದ ಎಲ್ಲಾ ಸಂಭಾವ್ಯ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಚುರುಕುಗೊಂಡ ತನಿಖೆ

ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯನ್ನು ಅನ್ವಯಿಸಿ ತನಿಖೆ ಮುಂದುವರಿಸಿದ್ದಾರೆ.

ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಳ

ಸ್ಫೋಟದ ನಂತರ ದೆಹಲಿ ಮತ್ತು ಮುಂಬೈ,ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿಸಿಟಿವಿ ಪರಿಶೀಲನೆ

ಕೆಂಪು ಕೋಟೆ ಬಳಿ ಸ್ಫೋಟಕ್ಕೆ ನಿಮಿಷಗಳ ಮೊದಲು ಹುಂಡೈ ಐ20 ಕಾರನ್ನು ಮಾಸ್ಕ್ ಧರಿಸಿದ ವ್ಯಕ್ತಿ ಚಲಾಯಿಸುತ್ತಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಮೂಲಕ ಹೊಸ ಚಿತ್ರವೊಂದು ಹೊರಬಿದ್ದಿದ್ದು, ಸ್ಫೋಟ ಸಂಭವಿಸುವ ಕೆಲವೇ ನಿಮಿಷಗಳ ಮೊದಲು ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಮಾಸ್ಕ್ ಧರಿಸಿದ ವ್ಯಕ್ತಿಯನ್ನು ತೋರಿಸುತ್ತದೆ.

ಹೊಸ ದೃಶ್ಯಗಳು ಪಾರ್ಕಿಂಗ್ ಸ್ಥಳದಿಂದ ಬಂದಿದ್ದು, ಕಪ್ಪು ಮಾಸ್ಕ್ ಧರಿಸಿದ ವ್ಯಕ್ತಿ HR26CE7674 ನಂಬರ್ ಪ್ಲೇಟ್‌ನೊಂದಿಗೆ ಹುಂಡೈ ಐ20 ಕಾರು ಚಾಲನೆ ಮಾಡುತ್ತಿರುವುದನ್ನು ತೋರಿಸಲಾಗಿದೆ. 

ಸಾವಿನಪ್ಪಿದ್ದವರು ಎಷ್ಟು..?

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಒಂಬತ್ತು ಮಂದಿ ಮೃತಪಟ್ಟು 20 ಜನರು ಗಾಯಗೊಂಡಿದ್ದ ಕೆಂಪು ಕೋಟೆ ಸ್ಫೋಟದಲ್ಲಿ ಭಾಗಿಯಾಗಿದ್ದ ಬಿಳಿ ಬಣ್ಣದ ಹುಂಡೈ i20 ಕಾರು ನಿನ್ನೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸ್ಥಳದ ಬಳಿಯೇ ನಿಂತಿತ್ತು ಎಂದು ತಿಳಿದುಬಂದಿದೆ. 

HR 26CE7674 ನಂಬರ್ ಪ್ಲೇಟ್ ಹೊಂದಿರುವ ಕಾರು ಅಪರಾಹ್ನ 3:19 ಕ್ಕೆ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿ ಸಂಜೆ 6:30 ರ ಸುಮಾರಿಗೆ ಹೊರಟುಹೋಯಿತು.

ನೀಲಿ ಮತ್ತು ಕಪ್ಪು ಬಣ್ಣದ ಟಿ-ಶರ್ಟ್ ಧರಿಸಿದ ಚಾಲಕ ಚಕ್ರದ ಹಿಂದೆ ಕೈ ಇಟ್ಟುಕೊಂಡು ನಿಂತಿರುವುದನ್ನು ಚಿತ್ರಗಳು ತೋರಿಸುತ್ತವೆ

ಇಬ್ಬರ ಬಂಧನ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಲ್ಮಾನ್ ಮತ್ತು ದೇವೇಂದರ್ ಎಂದು ಗುರುತಿಸಲಾದ ಈ ವ್ಯಕ್ತಿಗಳು ಈ ಹಿಂದೆ ಸ್ಫೋಟಗೊಂಡ ಹುಂಡೈ ಐ20 ಕಾರಿನ ಮಾಲೀಕರಾಗಿದ್ದರು. ಹೆಚ್ಚಿನ ಸುಳಿವುಗಳನ್ನು ಪಡೆಯಲು ಕಾರಿನ ವಿವರವಾದ ಮಾರಾಟ ಬಗ್ಗೆ ಪತ್ತೆಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button