Kannada NewsKarnataka NewsLatestPolitics

*BREAKING: ರಾಜ್ಯ ಕಾಂಗ್ರೆಸ್ ನಲ್ಲಿ ಕ್ಷಿಪ್ರ ಬೆಳವಣಿಗೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವರು, ಶಾಸಕರು ಒಬ್ಬೊಬ್ಬರಾಗಿ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನೇನೂ ಹೇಳುವುದಿಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ ಎಂದಿದ್ದಾರೆ.

Home add -Advt

ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ನಾನು ಏನೂ ಹೇಳುವುದಿಲ್ಲ. ಹೇಳಲು ಏನೂ ಇಲ್ಲ. ಯಾವುದೇ ವಿಚಾರ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.

Related Articles

Back to top button