Belagavi NewsBelgaum News

*ಗೆಳೆಯರ ಜೊತೆ ಪಾರ್ಟಿಗೆ ಹೊಗಿದ್ದ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗೆಳೆಯರ ಜತೆ ಪಾರ್ಟಿ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬೆಳಗಾವಿ ನಗರದ ಶಹಾಪುರ ಬಶೀರ್ ಚಿಕ್ಕೋಡಿ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಚಾಲಕನಾಗಿದ್ದ ಬಶೀರ್ ಚಿಕ್ಕೋಡಿ ತನ್ನ ಸ್ನೇಹಿತರೊಂದಿಗೆ ಸೇರಿ ಹಿಂಡಲಗಾದ ಸುಳಗಾದಲ್ಲಿ ಪಾರ್ಟಿ ಮಾಡಲು ಹೋಗಿದ್ದರು ಈ ಸಂದರ್ಭದಲ್ಲಿ ಬಶೀರ್ ಮೃತಪಟ್ಟಿದ್ದಾನೆ.

ಆತನ ಶವವನ್ನು ಬಶೀರ್ ಗೆಳೆಯರು ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಇದೊಂದು ಸಹಜ ಸಾವಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಂಠಪೂರ್ತಿ ಕುಡಿಸಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Home add -Advt

Related Articles

Back to top button