*ಬೆಳಗಾವಿ : ವ್ಯಕ್ತಿ ಕೊಲೆ; ಆರೋಪಿಗಳ ಬಂಧನ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ವ್ಯಾಪ್ತಿಯ ಬೆನಕಟ್ಟಿ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೋರ್ವನ ಕೊಲೆಯಾಗಿದೆ. ಸವದತ್ತಿ ತಾಲೂಕಿನ  ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ  ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21) ಹಾಗೂ ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಂಚಿ(28) ಬಂಧಿತ ಆರೋಪಿಗಳು.  ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. *ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು*