Karnataka News

*ಅಣ್ಣನ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ*

ಪ್ರಗತಿವಾಹಿನಿ ಸುದ್ದಿ: ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಅಣ್ಣನ ಮೇಲೆಯೇ ತಮ್ಮ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಳಿಯ ಕೋರಿಯರ್ ಎಂಬಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಎಂಬಾತ ತನ್ನ ಅಣ್ಣ ಹನುಮಪ್ಪ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಹುನುಮಪ್ಪನನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಅಣ್ಣ-ತಮ್ಮ ಇಬ್ಬರೂ ಗದಗ ಮೂಲದವರು. ಪುತ್ತೂರಿನಿಂದ ರೈಲಿನಲ್ಲಿ ಬಜಕೆರೆ ನಿಲ್ದಾಣಕ್ಕೆ ಬಂದು ಅಲ್ಲಿಂದ ನಡೆದು ಇಬ್ಬರೂ ಕೋರಿಯರ್ ಎಂಬ ಸ್ಥಳಕ್ಕೆ ಬಂದಿದ್ದರು. ಆರೋಪಿ ಪುತ್ತೂರಿನಲ್ಲಿ ಪೆಟ್ರೋಲ್ ಖರಿದಿಸಿದ್ದ ಎಂದು ತಿಳಿದುಬಂದಿದೆ.

Home add -Advt

Related Articles

Back to top button