Latest

ಪತಿ ಕೋವಿಡ್ ಗೆ ಬಲಿ; ಪತ್ನಿ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪತಿ ಸಾವನ್ನಪ್ಪಿದ ಬೆನ್ನಲ್ಲೇ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.

ಪತಿ ಕಿರಣ್ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪತಿ ಅಂತ್ಯಕ್ರಿಯೆ ಬಳಿಕ ಮನೆಗೆ ವಾಪಸ್ ಆದ ಪತ್ನಿ ಪೂಜಾ ನೇಣಿಗೆ ಕೊರಳೊಡ್ಡಿದ್ದಾರೆ.

ಕಿರಣ್ ಹಾಗೂ ಪೂಜಾ ದಂಪತಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು.
ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ; ಹಾಲು ಮಾರಲು ಬಂದವರಿಗೂ ಥಳಿತ

Home add -Advt

Related Articles

Back to top button