Kannada NewsKarnataka NewsLatest

*ರಾಜ್ಯಕ್ಕೂ ಕಾಲಿಟ್ಟ ಮಹಾಮಾರಿ; ಮದ್ದೂರಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ದೇಶದಲ್ಲಿ ಮಾಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ಕೇರಳದಲ್ಲಿ ಕೊರೊನಾ ಉಪತಳಿ JN.1 ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಕರ್ನಾಟಕದಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೋರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಭೀತಿ ಶುರುವಾಗಿದೆ.

Home add -Advt

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಕೊರೊನಾ ಸೋಂಕು ದೃಢಪಟ್ಟಿದೆ. ಹತ್ತು ದಿನಗಳ ಹಿಂದೆಯೇ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಮೂಲಕ ವ್ಯಕ್ತಿ ಗುಣಮುಖರಾಗಿದ್ದಾರೆ. ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತಿದೆ.

ಇನ್ನು ವ್ಯಕ್ತಿ ಸಂಪರ್ಕದಲ್ಲಿದ್ದ ನಾಲ್ವರಿಗೂ ಪರೀಕ್ಷಸಲಾಗಿದ್ದು, ಅವರಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.


Related Articles

Back to top button