ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕ್ವಾರಂಟೈನ್ ಮಾಡಿದ ಯುವಕನೊಬ್ಬ ಕೊರೊನಾ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ.
ಮುಂಬೈನಿಂದ ಬುಧವಾರ ಬಂದಿದ್ದ ಯುವಕನನ್ನು ಕಡಂದಲೆ ಶಾಲೆಯಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಯುವಕ ನೇಣಿಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ