Latest

*ಎರಡು ಶಾಲಾ ಬಸ್ ಗಳ ಭೀಕರ ಅಪಘಾತ; 15 ವಿದ್ಯಾರ್ಥಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಣಿಪುರ: ಎರಡು ಶಾಲಾ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಗ್ ಗ್ರಾಮದಲ್ಲಿ ನಡೆದಿದೆ.

ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಶಾಲೆಯಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಎರಡು ಬಸ್ ಗಳು ಪರಸ್ಪರ ಅಪಘಾತಕ್ಕೀಡಾಗಿವೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಬಸ್ ಅಪಘಾತದಾಲ್ಲಿ ವಿದ್ಯಾರ್ಥಿಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಎನ್ ಬಿರೇನ್ ಸಿಂಗ್, ಅಪಘಾತದ ಸುದ್ದಿ ತಿಳಿದು ತೀವ್ರ ದು:ಖವಾಗಿದೆ. ಎಸ್ ಡಿ ಆರ್ ಎಫ್, ವೈದ್ಯರ ತಂಡ, ಶಾಸಕರು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ ನಲ್ಲಿರುವ ಪ್ರತಿಯೊಬ್ಬರು ಸುರಕ್ಷಿತವಾಗಿರಲೆಂದು ಪ್ರಾರ್ಥಿಸುತೇನೆ ಎಂದು ತಿಳಿಸಿದ್ದಾರೆ.

*ಮೀಸಲಾತಿ ಬಿಕ್ಕಟ್ಟು; ಕಾಂಗ್ರೆಸ್ ನಿಲುವಿನ ಬಗ್ಗೆ ಡಿ.ಕೆಶಿವಕುಮಾರ್ ಹೇಳಿದ್ದೇನು?*

Home add -Advt

https://pragati.taskdun.com/d-k-shivakumarpresseetbelagavicongress-ticket/

Related Articles

Back to top button