Latest

ಪ್ರೀತಿಯ ಹೆಸರಲ್ಲಿ ಯುವತಿಗೆ ಮೋಸ; ಮದುವೆಗೆ ಒತ್ತಾಯಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಯುವಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರೀತಿಸಿ ವಂಚಿಸಿದ್ದ ಯುವಕನನ್ನು ಯುವತಿ ಮದುವೆಯಾಗುವಂತೆ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಹತ್ಯೆಗೈದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ದಾನೇಶ್ವರಿ (23) ಮೃತ ಯುವತಿ. ಎಂಜಿನಿಯರಿಂಗ ಓದುವ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಎಂಬಾತ ಪರಿಚಯವಾಗಿ ದಾನೇಶ್ವರಿ ಹಾಗೂ ಶಿವಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. ದಾನೇಶ್ವರಿ ತನ್ನನ್ನು ಮದುವೆಯಾಗುವಂತೆ ಶಿವಕುಮಾರ್ ನನ್ನು ಕೇಳಿದ್ದಳು. ಪ್ರೀತಿ-ಪ್ರೇಮದ ಹೆಸರಲ್ಲಿ ವಂಚಿಸಿದ್ದ ಶಿವಕುಮಾರ್ ಮದುವೆಯಾಗಲು ನಿರಾಕರಿಸಿದ್ದ.

ದಾನೇಶ್ವರಿ ಮನೆಯಲ್ಲಿ ಆಕೆಯ ಮದುವೆಗೆ ಹುಡುಗನನ್ನು ಹುಡುಕುತ್ತಿದ್ದರು. ಈ ವೇಳೆ ದಾನೇಶ್ವರಿ ತನ್ನ ತಂದೆಗೆ, ಶಿವಕುಮಾರ್ ಎಂಬಾತನ್ನನು ಪ್ರೀತಿಸುತ್ತಿರುವುದಾಗಿ ಹಾಗೂ ಆತ ಮದುವೆಗೆ ನಿರಾಕರಿಸುತ್ತಿರುವುದಾಗಿ ಹೇಳಿದ್ದಳು.

ಮದುವೆ ಕಾರಣಕ್ಕೆ ಯುವಕ-ಯುವತಿ ನಡುವೆ ಜಗಳ ನಡೆದಿದೆ. ನಿನ್ನನ್ನು ಕೊಲೆ ಮಾಡುತ್ತೇನೆ ಹೊರತು ಮದುವೆಯಾಗುವುದಿಲ್ಲ ಎಂದು ಶಿವಕುಮಾರ್ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಅಲ್ಲದೇ ಯುವತಿ ದಾನೇಶ್ವರಿ ಮೇಲೆ ಮಾರ್ಚ್ 15ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸುಟ್ಟುಗಾಯಗೊಂಡಿದ್ದ ಯುವತಿಯನ್ನು ಕೂಡ್ಲು ಬಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಯುವಕ ನಾಪತ್ತೆಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ಅಡಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪಾದ್ರಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button