Karnataka News

*ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಏಕಾಏಕಿ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧು ಅಲಿಯಾಸ್ ಅಶೋಕ್ ಮೃತ ವ್ಯಕ್ತಿ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಧು ಅವರ ಮೂರು ವರ್ಷದ ಮಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪತ್ನಿ ಮಗಳನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದರು. ವಾರದ ಹಿಂದೆ ಪತ್ನಿ-ಮಗಳು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಬಂದಿದ್ದರು. ಭಾನುವಾರ ಮಧು ತಾಯಿ ಕೂಡ ಬೆಂಗಳೂಗೆ ಬಂದಿದ್ದಾರೆ. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಮಧು ಕಂಠ ಪೂರ್ತಿ ಮದ್ಯ ಸೇವಿಸಿ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button