Karnataka News

*ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ FIR ದಾಖಲು: ಏನಿದು ಪ್ರಕರಣ?*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ವಕ್ಫ್ ವಿರುದ್ಧ ಕಲಬುರಗಿ ಜಿಲೆಯ ಅಫಜಲಪುರದಲ್ಲಿ ನಡೆದಿದ್ದ ವಕ್ಫ್ ಹಠಾವೋ, ದೇಶ ಬಚಾವೋ ಪ್ರತಿಭಟನೆಯ ವೇಳೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ. ವಕ್ಫ್ ತೆಗೆಯದಿದ್ದರೆ ಜೀವ ತೆಗೆಯೋಕೆ ನಾವು ರೆಡಿ ಎಂದು ಹೇಳಿಕೆ ನೀಡಿದ್ದರು.

ನಿನ್ನೆ ನಡೆದಿದ್ದ ಪ್ರತಿಭಟನೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದರು. ಪ್ರತಿಭಟನಾ ಧರಣಿಯಲ್ಲಿ ಪ್ರಚೋದನಾಕಾರಿ ಭಾಷಣ ನೀಡಿದ ಹಿನ್ನೆಲೆಯಲ್ಲಿ ಇದೀಗ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Home add -Advt

Marularadhya shivacharya swamiji,FIR,Kalaburagi

Related Articles

Back to top button