Kannada NewsKarnataka NewsLatest

*ಕರ್ನಾಟಕ ಗಡಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ: ಅಲರ್ಟ್ ಆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಸ್ಫೋಟದಿಂದ ಎಲ್ಲಡೆ ಕಟ್ಟಚ್ಚರ ವಹಿಸಿರುವ ಪೊಲೀಸರಿಗೆ ಕರ್ನಾಟಕದ ಕಡಿಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟಕಗಳು ಪತ್ತೆ ಆಗಿವೆ.‌

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್‌ಪೋಸ್ಟ್‌ ಮುಖಾಂತರ ಕಾರಿನಲ್ಲಿ 1200 ಜಿಲೆಟಿನ್ ಕಡ್ಡಿ, 7 ಬಾಕ್ಸ್‌ ವೈಯರ್‌, 6 ಡಿಟೋನೇಟರ್ ಸಾಗಿಸುತ್ತಿದ್ದರು. ಈ ವೇಳೆ ಪೊಲೀಸರು ಅನುಮಾನಗೊಂಡು ತಪಾಸಣೆ ನಡೆಸಿದಾಗ, ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿವೆ.

ಕಾರಿನಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಜಾಕೀರ್ ಹುಸೇನ್​ ಎನ್ನುವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತು ಕಾರಿನಲ್ಲಿದ್ದ ಮತ್ತೊಬ್ಬ ಪರಾರಿಯಾಗಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button