*ಕರ್ನಾಟಕ ಗಡಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ: ಅಲರ್ಟ್ ಆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಸ್ಫೋಟದಿಂದ ಎಲ್ಲಡೆ ಕಟ್ಟಚ್ಚರ ವಹಿಸಿರುವ ಪೊಲೀಸರಿಗೆ ಕರ್ನಾಟಕದ ಕಡಿಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟಕಗಳು ಪತ್ತೆ ಆಗಿವೆ.‌ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್‌ಪೋಸ್ಟ್‌ ಮುಖಾಂತರ ಕಾರಿನಲ್ಲಿ 1200 ಜಿಲೆಟಿನ್ ಕಡ್ಡಿ, 7 ಬಾಕ್ಸ್‌ ವೈಯರ್‌, 6 ಡಿಟೋನೇಟರ್ ಸಾಗಿಸುತ್ತಿದ್ದರು. ಈ ವೇಳೆ ಪೊಲೀಸರು ಅನುಮಾನಗೊಂಡು ತಪಾಸಣೆ ನಡೆಸಿದಾಗ, ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿವೆ. ಕಾರಿನಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಜಾಕೀರ್ ಹುಸೇನ್​ ಎನ್ನುವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. … Continue reading *ಕರ್ನಾಟಕ ಗಡಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ: ಅಲರ್ಟ್ ಆದ ಪೊಲೀಸರು*