*ಹಿಂದಿ ದಿವಸ್‌ ವಿರುದ್ಧ ಕರವೇ  ಕಾರ್ಯಕರ್ತರ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಕೇಂದ್ರ ಸರ್ಕಾರ ಸೆ.14ರಂದು ‘ಹಿಂದಿ ದಿವಸ್‌’ ಆಚರಣೆಯ ಹೆಸರಿನಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರಿಕೆ ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಕರವೇ  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ  ಕಾರ್ಯಕರ್ತರು ರೈಲ್ವೆ ವೃತ್ತದಲ್ಲಿ ಶನಿವಾರ  ಪ್ರತಿಭಟಿಸಿ,  ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.  ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಈ ಮೂಲಕ ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಭಾರತದ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಭಾಷಿಕ … Continue reading *ಹಿಂದಿ ದಿವಸ್‌ ವಿರುದ್ಧ ಕರವೇ  ಕಾರ್ಯಕರ್ತರ ಬೃಹತ್ ಪ್ರತಿಭಟನೆ*