Latest

ಎಂಬಿಎ ಪದವಿಧರೆ ಆತ್ಮಹತ್ಯೆಗೆ ಶರಣು; ಪ್ರತಿಭಟನೆಗೆ ಮುಂದಾದ ಯುವ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉದ್ಯೋಗದಿದ್ದರಿಂದ ಮನನೊಂದ ಎಂಬಿಎ ಪದವಿಧರೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.

ಸಹನಾ (23) ಆತ್ಮಹತ್ಯೆಗೆ ಶರಣಾದ ಯುವತಿ. ಉಪ್ಪಿನಂಗಡಿಯವರಾದ ಸಹನಾ ಒಂದುವರೆ ವರ್ಷದ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಮುಗಿಸಿದ್ದರು. ಸೂಕ್ತ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರು. ಎಷ್ಟೇ ಯತ್ನಿಸಿದರೂ ತಮ್ಮ ವಿದ್ಯಾರ್ಹತೆಗೆ ತಕ್ಕದಾದ ಉದ್ಯೋಗ ಸಿಗದೇ ಮನನೊಂದಿದ್ದರು.

ಏ.30ರಂದು ತನ್ನ ಸಹೋದರಿ ಮನೆಗೆ ಬಂದಿದ್ದ ಸಹನಾ ಅಲ್ಲಿಯೇ ವಿಷ ಸೇವಿಸಿದ್ದಾಳೆ. ಬೆಳಿಗ್ಗೆ ವಿಪರೀತ ವಾಂತಿ ಮಾಡಿಕೊಳ್ಳುತ್ತಿದ್ದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಸ್ಥಿತಿ ತಲುಪಿದ್ದ ಸಹನಾಳನ್ನು ಮೇ 7ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 9ರಂದು ಮೃತಪಟ್ಟಿದ್ದರು.

ಎಂಬಿಎ ಪದವಿಧರೆ ಉದ್ಯೋಗ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಇದೀಗ ರಾಜ್ಯಾದ್ಯತ ಸುದ್ದಿಯಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಡುಪಿಯಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಯುವಕರಿಗೆ ಉದ್ಯೋಗ ಸೃಷ್ಟಿಸದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಘಟಕ ಆಕ್ರೋಶ ವ್ಯಕ್ತಪಡಿಸಿದೆ.
ಮೊದಲ ಕೋವಿಡ್ ಕೇಸ್ ಪತ್ತೆ; ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಿದ ಉತ್ತರ ಕೊರಿಯಾ ಸರ್ಕಾರ

Home add -Advt

Related Articles

Back to top button