ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕುಮಾರೇಶ್ವರ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
22 ವರ್ಷದ ಸಿಂಧುರೇಖಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಸಿಂಧುರೇಖಾ, ಖಿನ್ನತೆಯಿಂದ ಬಳಲುತ್ತಿದಳು ಎನ್ನಲಾಗಿದೆ.
ಪೋಷಕರೊಂದಿಗೆ ಸಿಂಧುರೇಖಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ನಿನ್ನೆ ಪೋಷಕರು ಬೇಂಗಳೂರಿಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ