
ಪ್ರಗತಿವಾಹಿನಿ ಸುದ್ದಿ: ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ನ ಬಿ ಆರ್ ಐ ಎಂ ಎಸ್ ಸಂಸ್ಥೆಯ ಆವರಣದಲ್ಲಿಯೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಿಷ್ಕಾರ್ ಚೌವ್ಹಾಣ್ ಆತ್ಮಹತ್ಯೆಗೆ ಶರಣಾದವನು. ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ.
ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶೈಕ್ಷಣಿಕ ಒತ್ತಡ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



